Description
‘ಹೊನ್ನಾವರಿಕೆ’ ಎಂ. ಆರ್. ಕಮಲ ಅವರ ಹೊಸ ಪ್ರಬಂಧ ಸಂಕಲನ. ಅವರ ಈ ಹಿಂದಿನ ಗದ್ಯ ಬರಹಗಳಂತೆಯೇ ಸರಳ ಮತ್ತು ನೇರ ನಿರೂಪಣೆ ಈ ಪ್ರಬಂಧಗಳಲ್ಲಿಯೂ ವಿಸ್ತಾರಗೊಂಡಿದೆ. ಈ ಅಂಶಗಳೇ ಅವರಿಗೆ ತಮ್ಮದೇ ಓದುಗ ವರ್ಗವನ್ನು ಸೃಷ್ಟಿಸಿಕೊಟ್ಟಿವೆ.
ಮನುಷ್ಯನ ಖಾಸಗಿ ಬದುಕಿನ ಅನುಭವಗಳು ಲೋಕಾನುಭವವಾಗಿ ಬದಲಾದಾಗ ಅರಿವೇ ಆಗದೆ ಓದುಗನ ಮನಸ್ಸನ್ನು ವ್ಯಾಪಿಸಬಲ್ಲವು. ಇಲ್ಲಿ ಹೇಳುತ್ತಿರುವ ಸಂಗತಿ, ಪ್ರಸಂಗ, ಅನುಭವಗಳು ನಮಗೂ ಆಗಿವೆಯಲ್ಲ ಎಂಬ ಅಚ್ಚರಿಯಲ್ಲಿ ಓದುಗ ಅದರಲ್ಲಿ ತಲ್ಲೀನನಾಗಬಲ್ಲ ಗುಣವನ್ನು ಈ ಪ್ರಬಂಧಗಳು ಪಡೆದಿವೆ. ಬದುಕಿನ ಸಾಮಾನ್ಯ ಸಂಗತಿಗಳಿಗೂ ಅದರದೇ ಆದ ಚೆಲುವು ಇರುತ್ತದೆಂಬ ಅರಿವನ್ನು ಈ ಬರಹಗಳು ಮೂಡಿಸುತ್ತವೆ.